ಪಾಕಿಸ್ತಾನಕ್ಕೆ ಹೊಸದಾಗಿ ನೇಮಕಗೊಂಡ ಆಸ್ಟ್ರೇಲಿಯಾದ ಹೈಕಮಿಷನರ್ ನೀಲ್ ಹಾಕಿನ್ಸ್ ಅವರ ಜತೆ ಗುರುವಾರ ನಡೆಸಿದ ಸಭೆಯಲ್ಲಿ ಷರೀಫ್ ಅವರು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಗಳಿಗೆ ಮತ್ತು ಕಾಶ್ಮೀರಿ ಜನರ ಆಶಯಗಳಿಗೆ ಅನುಗುಣವಾಗಿ ಜಮ್ಮು ಮತ್ತು ಕಾಶ್ಮೀರ ವಿವಾದ ಶಾಂತಿಯುತವಾಗಿ ಪರಿಹರಿಸುವುದು ಅಗತ್ಯ ಎಂದು ಹೇಳಿರುವುದಾಗಿ ಪ್ರಧಾನಿ ಕಚೇರಿಯ ಹೇಳಿಕೆ ಉಲ್ಲೇಖಿಸಿ ‘ಡಾನ್’ ಪತ್ರಿಕೆ ವರದಿ ಮಾಡಿತ್ತು.