‘ನಾವು ಭಾರತದೊಂದಿಗೆ ಉತ್ತಮ ಬಾಂಧವ್ಯವನ್ನು ಬಯಸುತ್ತೇವೆ. ಆದರೆ, ಕಾಶ್ಮೀರ ವಿವಾದವನ್ನು ಬಗೆಹರಿಸುವವರೆಗೆ ಶಾಂತಿ ನಿರ್ಮಾಣ ಸಾಧ್ಯವಿಲ್ಲ’ ಎಂದು ಅವರು ಹೇಳಿದರು. ಪಾಕಿಸ್ತಾನವು ಕಾಶ್ಮೀರದ ಜನರಿಗೆ ರಾಜಕೀಯ, ರಾಜತಾಂತ್ರಿಕ ಮತ್ತು ನೈತಿಕ ಬೆಂಬಲವನ್ನು ನೀಡುವುದನ್ನು ಮುಂದುವರಿಸುತ್ತದೆ. ನಾವು ಕಾಶ್ಮೀರಿ ಸಹೋದರ, ಸಹೋದರಿಯರಿಗಾಗಿ ಪ್ರತಿ ವೇದಿಕೆಯಲ್ಲಿ ಧ್ವನಿ ಎತ್ತುತ್ತೇವೆ ಎಂದರು.