ಭಾರತ ತನ್ನ ಅಧಿಕಾರಾವಧಿಯಲ್ಲಿ ಕೈಗೊಳ್ಳುವ ಕಾರ್ಯಚಟುವಟಿಕೆಗಳ ಬಗ್ಗೆ ಸೋಮವಾರ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವರದಿಗಾರರಿಗೆ ಟಿ.ಎಸ್. ತಿರುಮೂರ್ತಿ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು. ‘ತನ್ನ ಅಧಿಕಾರಾವಧಿಯಲ್ಲಿ ಕಡಲ ಭದ್ರತೆ, ಶಾಂತಿ ಪಾಲನೆ ಮತ್ತು ಭಯೋತ್ಪಾದನೆ ನಿಗ್ರಹಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಆಯೋಜಿಸಲು ಸಿದ್ಧತೆ ನಡೆಸಿದೆ‘ ಎಂದು ತಿರುಮೂರ್ತಿ ತಿಳಿಸಿದರು.