<p><strong>ವಿಶ್ವಸಂಸ್ಥೆ: </strong>ಸಂಘರ್ಷ ಪೀಡಿತ ಅಫ್ಗಾನಿಸ್ತಾನದಲ್ಲಿ ವಿಶ್ವಸಂಸ್ಥೆ ಸಂಗ್ರಹ ಮಾಡಿರುವ ಆಹಾರ ಈ ತಿಂಗಳಾಂತ್ಯಕ್ಕೆ ಮುಗಿಯಲಿದ್ದು, ಆಹಾರ ಸಮಸ್ಯೆ ತಲೆದೋರಲಿದೆ ಎಂದು ವಿಶ್ವಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ಅಫ್ಗಾನಿಸ್ತಾನಕ್ಕೆ ಸಂಬಂಧಿಸಿದ ವಿಶೇಷ ಪ್ರತಿನಿಧಿ ರಮೀಜ್ ಅಲಕ್ಬರೋವ್ ಈ ಎಚ್ಚರಿಕೆ ನೀಡಿದ್ದು, ಸಂಕಷ್ಟಕ್ಕೆ ಸಿಲುಕಿರುವ ಪ್ರಜೆಗಳಿಗೆ ಆಹಾರ ಪೂರೈಸಲು ₹ 1,461 ಕೋಟಿ ಅಗತ್ಯವಿದೆ ಎಂದು ಹೇಳಿದ್ದಾರೆ.</p>.<p>‘ಆಹಾರದ ಕೊರತೆ ಎಷ್ಟಿದೆ ಎಂದರೆ, ದೇಶದ ಜನಸಂಖ್ಯೆಯ ಮೂರನೇ ಒಂದರಷ್ಟು ಜನರಿಗೆ ಒಂದು ಹೊತ್ತಿನ ಊಟ ಸಿಗುತ್ತದೆಯೋ ಇಲ್ಲವೋ ಎಂಬ ಖಾತರಿ ಇಲ್ಲದಂತಾಗಿದೆ’ ಎಂದು ಅವರು ಕಾಬೂಲ್ನಲ್ಲಿ ನಡೆಸಿದ ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.</p>.<p>‘ಮಕ್ಕಳು ಹೆಚ್ಚು ಸಂಕಷ್ಟ ಎದುರಿಸುತ್ತಿದ್ದಾರೆ. ಅದರಲ್ಲೂ ಐದು ವರ್ಷದೊಳಗಿನ ಮಕ್ಕಳು ವಿಪರೀತ ಅಪೌಷ್ಟಿಕತೆಯಂದ ಬಳಲುತ್ತಿದ್ದು, ಆಹಾರದ ದಾಸ್ತಾನು ಕೊನೆಗೊಂಡರೆ ಈ ಮಕ್ಕಳಿಗೆ ಮತ್ತಷ್ಟು ತೊಂದರೆಯಾಗಲಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ: </strong>ಸಂಘರ್ಷ ಪೀಡಿತ ಅಫ್ಗಾನಿಸ್ತಾನದಲ್ಲಿ ವಿಶ್ವಸಂಸ್ಥೆ ಸಂಗ್ರಹ ಮಾಡಿರುವ ಆಹಾರ ಈ ತಿಂಗಳಾಂತ್ಯಕ್ಕೆ ಮುಗಿಯಲಿದ್ದು, ಆಹಾರ ಸಮಸ್ಯೆ ತಲೆದೋರಲಿದೆ ಎಂದು ವಿಶ್ವಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ಅಫ್ಗಾನಿಸ್ತಾನಕ್ಕೆ ಸಂಬಂಧಿಸಿದ ವಿಶೇಷ ಪ್ರತಿನಿಧಿ ರಮೀಜ್ ಅಲಕ್ಬರೋವ್ ಈ ಎಚ್ಚರಿಕೆ ನೀಡಿದ್ದು, ಸಂಕಷ್ಟಕ್ಕೆ ಸಿಲುಕಿರುವ ಪ್ರಜೆಗಳಿಗೆ ಆಹಾರ ಪೂರೈಸಲು ₹ 1,461 ಕೋಟಿ ಅಗತ್ಯವಿದೆ ಎಂದು ಹೇಳಿದ್ದಾರೆ.</p>.<p>‘ಆಹಾರದ ಕೊರತೆ ಎಷ್ಟಿದೆ ಎಂದರೆ, ದೇಶದ ಜನಸಂಖ್ಯೆಯ ಮೂರನೇ ಒಂದರಷ್ಟು ಜನರಿಗೆ ಒಂದು ಹೊತ್ತಿನ ಊಟ ಸಿಗುತ್ತದೆಯೋ ಇಲ್ಲವೋ ಎಂಬ ಖಾತರಿ ಇಲ್ಲದಂತಾಗಿದೆ’ ಎಂದು ಅವರು ಕಾಬೂಲ್ನಲ್ಲಿ ನಡೆಸಿದ ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.</p>.<p>‘ಮಕ್ಕಳು ಹೆಚ್ಚು ಸಂಕಷ್ಟ ಎದುರಿಸುತ್ತಿದ್ದಾರೆ. ಅದರಲ್ಲೂ ಐದು ವರ್ಷದೊಳಗಿನ ಮಕ್ಕಳು ವಿಪರೀತ ಅಪೌಷ್ಟಿಕತೆಯಂದ ಬಳಲುತ್ತಿದ್ದು, ಆಹಾರದ ದಾಸ್ತಾನು ಕೊನೆಗೊಂಡರೆ ಈ ಮಕ್ಕಳಿಗೆ ಮತ್ತಷ್ಟು ತೊಂದರೆಯಾಗಲಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>