<p><strong>ನವದೆಹಲಿ: </strong>ಅಫ್ಗಾನಿಸ್ತಾನದ ಪರಿಸ್ಥಿತಿಯನ್ನು ಭಾರತವು ನಿರಂತರವಾಗಿ ಗಮನಿಸುತ್ತಿದೆ. ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆ ಹಾಗೂ ಅಲ್ಲಿ ಭಾರತದ ಹಿತಾಸಕ್ತಿಗಳನ್ನು ಕಾಪಾಡಲು ಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ವಿದೇಶಾಂಗ ಇಲಾಖೆ ತನ್ನ ಮೊದಲ ಪ್ರತಿಕ್ರಿಯೆಯಲ್ಲಿ ತಿಳಿಸಿದೆ.</p>.<p>ಭಾರತವು ಅಫ್ಘಾನಿಸ್ತಾನದ ಸಿಖ್ ಮತ್ತು ಹಿಂದೂ ಸಮುದಾಯಗಳ ಪ್ರತಿನಿಧಿಗಳೊಂದಿಗೆ ಸಂಪರ್ಕದಲ್ಲಿದೆ ಮತ್ತು ಆ ದೇಶವನ್ನು ತೊರೆಯಲು ಇಚ್ಛಿಸುವವರನ್ನು ವಾಪಸ್ ಕರೆಸಿಕೊಳ್ಳಲು ಅನುಕೂಲ ಮಾಡಿಕೊಡುತ್ತದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಹೇಳಿದ್ದಾರೆ.</p>.<p>‘ಅಫ್ಗಾನಿಸ್ತಾನದಲ್ಲಿನ ಪರಿಸ್ಥಿತಿಯನ್ನು ನಿರಂತರವಾಗಿ ಉನ್ನತ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಅಫ್ಗಾನಿಸ್ತಾನದಲ್ಲಿ ಭಾರತೀಯರು ಹಾಗೂ ನಮ್ಮ ದೇಶದ ಹಿತಾಸಕ್ತಿಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ’ಎಂದು ಬಾಗ್ಚಿ ಹೇಳಿದ್ದಾರೆ.</p>.<p>ಆಫ್ಗಾನ್ ಅಧ್ಯಕ್ಷ ಅಶ್ರಫ್ ಘನಿ ಅಜ್ಞಾತ ಸ್ಥಳಕ್ಕೆ ತೆರಳಿದ ನಂತರ ಭಾನುವಾರ ಸಂಜೆ ಕೆಲವೇ ಗಂಟೆಗಳಲ್ಲಿ ಕಾಬೂಲ್ ನಗರವನ್ನು ತಾಲಿಬಾನ್ ಆಕ್ರಮಿಸಿಕೊಂಡಿತು.</p>.<p>‘ಕಳೆದ ಕೆಲವು ದಿನಗಳಲ್ಲಿ ಕಾಬೂಲ್ನಲ್ಲಿ ಭದ್ರತಾ ಪರಿಸ್ಥಿತಿ ಗಣನೀಯವಾಗಿ ಹದಗೆಟ್ಟಿದೆ. ನಾವು ಮಾತನಾಡುವಾಗಲೂ ಅದು ವೇಗವಾಗಿ ಬದಲಾಗುತ್ತಿದೆ’ಎಂದು ಬಾಗ್ಚಿ ಹೇಳಿದರು.</p>.<p>ಪರಸ್ಪರ ಅಭಿವೃದ್ಧಿ, ಶೈಕ್ಷಣಿಕ ಮತ್ತು ಮುಂತಾದ ಪ್ರಯತ್ನಗಳಲ್ಲಿ ಭಾರತದ ಪಾಲುದಾರರಾಗಿರುವ ಹಲವಾರು ಅಫ್ಘಾನಿಸ್ತಾನಿಗಳಿದ್ದಾರೆ. ಭಾರತವು ಅವರ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಅವರು ಅವರು ಹೇಳಿದರು.</p>.<p>‘ಭಾರತಕ್ಕೆ ತಕ್ಷಣ ಹಿಂದಿರುಗಬೇಕೆಂಬ ಸೂಚನೆ ಸೇರಿದಂತೆ ನಾವು ಆ ದೇಶದಲ್ಲಿರುವ ಭಾರತೀಯರ ರಕ್ಷಣೆ ಮತ್ತು ಸುರಕ್ಷತೆಗಾಗಿ ನಿಯಮಿತವಾಗಿ ಸಲಹೆಗಳನ್ನು ನೀಡುತ್ತಿದ್ದೇವೆ’ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಅಫ್ಗಾನಿಸ್ತಾನದ ಪರಿಸ್ಥಿತಿಯನ್ನು ಭಾರತವು ನಿರಂತರವಾಗಿ ಗಮನಿಸುತ್ತಿದೆ. ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆ ಹಾಗೂ ಅಲ್ಲಿ ಭಾರತದ ಹಿತಾಸಕ್ತಿಗಳನ್ನು ಕಾಪಾಡಲು ಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ವಿದೇಶಾಂಗ ಇಲಾಖೆ ತನ್ನ ಮೊದಲ ಪ್ರತಿಕ್ರಿಯೆಯಲ್ಲಿ ತಿಳಿಸಿದೆ.</p>.<p>ಭಾರತವು ಅಫ್ಘಾನಿಸ್ತಾನದ ಸಿಖ್ ಮತ್ತು ಹಿಂದೂ ಸಮುದಾಯಗಳ ಪ್ರತಿನಿಧಿಗಳೊಂದಿಗೆ ಸಂಪರ್ಕದಲ್ಲಿದೆ ಮತ್ತು ಆ ದೇಶವನ್ನು ತೊರೆಯಲು ಇಚ್ಛಿಸುವವರನ್ನು ವಾಪಸ್ ಕರೆಸಿಕೊಳ್ಳಲು ಅನುಕೂಲ ಮಾಡಿಕೊಡುತ್ತದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಹೇಳಿದ್ದಾರೆ.</p>.<p>‘ಅಫ್ಗಾನಿಸ್ತಾನದಲ್ಲಿನ ಪರಿಸ್ಥಿತಿಯನ್ನು ನಿರಂತರವಾಗಿ ಉನ್ನತ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಅಫ್ಗಾನಿಸ್ತಾನದಲ್ಲಿ ಭಾರತೀಯರು ಹಾಗೂ ನಮ್ಮ ದೇಶದ ಹಿತಾಸಕ್ತಿಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ’ಎಂದು ಬಾಗ್ಚಿ ಹೇಳಿದ್ದಾರೆ.</p>.<p>ಆಫ್ಗಾನ್ ಅಧ್ಯಕ್ಷ ಅಶ್ರಫ್ ಘನಿ ಅಜ್ಞಾತ ಸ್ಥಳಕ್ಕೆ ತೆರಳಿದ ನಂತರ ಭಾನುವಾರ ಸಂಜೆ ಕೆಲವೇ ಗಂಟೆಗಳಲ್ಲಿ ಕಾಬೂಲ್ ನಗರವನ್ನು ತಾಲಿಬಾನ್ ಆಕ್ರಮಿಸಿಕೊಂಡಿತು.</p>.<p>‘ಕಳೆದ ಕೆಲವು ದಿನಗಳಲ್ಲಿ ಕಾಬೂಲ್ನಲ್ಲಿ ಭದ್ರತಾ ಪರಿಸ್ಥಿತಿ ಗಣನೀಯವಾಗಿ ಹದಗೆಟ್ಟಿದೆ. ನಾವು ಮಾತನಾಡುವಾಗಲೂ ಅದು ವೇಗವಾಗಿ ಬದಲಾಗುತ್ತಿದೆ’ಎಂದು ಬಾಗ್ಚಿ ಹೇಳಿದರು.</p>.<p>ಪರಸ್ಪರ ಅಭಿವೃದ್ಧಿ, ಶೈಕ್ಷಣಿಕ ಮತ್ತು ಮುಂತಾದ ಪ್ರಯತ್ನಗಳಲ್ಲಿ ಭಾರತದ ಪಾಲುದಾರರಾಗಿರುವ ಹಲವಾರು ಅಫ್ಘಾನಿಸ್ತಾನಿಗಳಿದ್ದಾರೆ. ಭಾರತವು ಅವರ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಅವರು ಅವರು ಹೇಳಿದರು.</p>.<p>‘ಭಾರತಕ್ಕೆ ತಕ್ಷಣ ಹಿಂದಿರುಗಬೇಕೆಂಬ ಸೂಚನೆ ಸೇರಿದಂತೆ ನಾವು ಆ ದೇಶದಲ್ಲಿರುವ ಭಾರತೀಯರ ರಕ್ಷಣೆ ಮತ್ತು ಸುರಕ್ಷತೆಗಾಗಿ ನಿಯಮಿತವಾಗಿ ಸಲಹೆಗಳನ್ನು ನೀಡುತ್ತಿದ್ದೇವೆ’ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>