ಆರ್ಥಿಕ ಬಿಕ್ಕಟ್ಟು ನಿವಾರಣೆ, ಸ್ಥಿರತೆ ಮತ್ತು ಸುಧಾರಣೆಗಾಗಿ ಸಹಕಾರ ಮತ್ತು ಸಂಕಷ್ಟಕ್ಕೆ ಸಿಲುಕಿದ ಜನರ ರಕ್ಷಣೆ ಬಗ್ಗೆ ಮಾತುಕತೆ ನಡೆಸಲಾಗಿದೆ. ಈ ಬಿಕ್ಕಟ್ಟಿನಿಂದ ಬಡವರು ಮತ್ತು ಅತಿ ಬಡವರ ಮೇಲೆ ಆಗುವ ಪರಿಣಾಮಗಳ ಬಗ್ಗೆ ವಿಶ್ವಬ್ಯಾಂಕ್ ಕಳವಳಕ್ಕೀಡಾಗಿದೆ. ಹೀಗಾಗಿ ಶ್ರೀಲಂಕಾಕ್ಕೆ ವೈದ್ಯಕೀಯ, ಆರೋಗ್ಯ ಸಂಬಂಧಿತ ಸಲಕರಣೆಗಳು, ಪೌಷ್ಟಿಕಾಂಶ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದಂತೆ ತುರ್ತು ನೆರವು ನೀಡಲು ಸಿದ್ಧ ಇರುವುದಾಗಿ ಎದು ಶಾಫರ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.