<p><strong>ಬೆಂಗಳೂರು:</strong> ‘ವಿಪತ್ತು, ಆರೋಗ್ಯ ಆರೈಕೆ, ನೊಂದವರ ಮತ್ತು ದುರ್ಬಲರ ಸೇವೆಗೆ ತನ್ನನ್ನು ತಾನು ಸಮರ್ಪಿಸಿಕೊಳ್ಳಲು ಮಾನವನಿಗೆ ಮಾನವೀಯತೆ, ಸ್ವಾತಂತ್ರ್ಯ ಹಾಗೂ ನಿಷ್ಪಕ್ಷಪಾತ ಮನೋಭಾವ ಅಗತ್ಯ’ ಎಂದುಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಎಸ್.ಜಯಕುಮಾರ್ ಅಭಿಪ್ರಾಯಪಟ್ಟರು.</p>.<p>ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ಬುಧವಾರ ಆಯೋಜಿಸಿದ್ದ ರೆಡ್ಕ್ರಾಸ್ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಮಾನವೀಯ ತತ್ವ ಮತ್ತು ಮೌಲ್ಯಗಳನ್ನು ಬೆಳೆಸುವ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ರೂಪಿಸಲು ಸಂಸ್ಥೆ ಮುಂದಾಗಿದೆ. ಅದಕ್ಕೆ ಬೇಕಾದ ಎಲ್ಲ ಸಹಕಾರಗಳನ್ನು ಶಿಕ್ಷಣ ಇಲಾಖೆ ನೀಡಲಿದೆ. ಧರ್ಮ, ಜಾತಿ ನೋಡದೆ ಚಿಕಿತ್ಸೆಗೆ ಶ್ರಮಿಸುತ್ತಿರುವ ಸಂಸ್ಥೆ ಸೇವೆ ಅನನ್ಯ’ ಎಂದರು.</p>.<p>ಸಂಸ್ಥೆಯ ರಾಜ್ಯ ಘಟಕದ ಉಪಾಧ್ಯಕ್ಷ ಡಾ.ಎಂ.ಕೆ.ಶ್ರೀಧರ್, ‘ರೈಲು ಅಪಘಾತವಾದರೆ ಸಾವಿರಾರು ಮಂದಿ ನೋಡುತ್ತಾರೆ. ಆದರೆ, ಸಹಾಯಕ್ಕೆ ಯಾರೊಬ್ಬರೂ ಹೋಗುವುದಿಲ್ಲ. ಇದು ಸರಿಯಲ್ಲ. ವಯಸ್ಸಿನ ಮಿತಿಯಿಲ್ಲದೆ ಇನ್ನೊಬ್ಬರ ಕಷ್ಟಕ್ಕೆ ಹತ್ತಿರವಾಗಬೇಕು’ ಎಂದು ಹೇಳಿದರು.</p>.<p>ಸಂಸ್ಥೆಯ ರಾಜ್ಯ ಘಟಕದ ಅಧ್ಯಕ್ಷ ಎಸ್.ನಾಗಣ್ಣ, ‘ರೆಡ್ಕ್ರಾಸ್ ಸಂಸ್ಥೆಗೆ ಇನ್ಫೋಸಿಸ್ ಸಂಸ್ಥೆ ₹ 2 ಕೋಟಿ ಕೊಡುಗೆ ನೀಡಿದೆ. ಸಂಸ್ಥೆಯ ಶಾಖೆಗಳನ್ನು 9 ಜಿಲ್ಲೆಗಳಲ್ಲಿ ಸ್ಥಾಪಿಸಲಾಗಿದೆ’ ಎಂದು ಹೇಳಿದರು.</p>.<p>ಸಿಂಡಿಕೇಟ್ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ಅವರು ₹16.4 ಲಕ್ಷ ಮೌಲ್ಯದ ರಕ್ತ ನಿಧಿ ಉಪಕರಣ<br />ಗಳನ್ನು ಕೊಡುಗೆ ನೀಡಿದರು.</p>.<p>‘ರೆಡ್ ಕ್ರಾಸ್ ಬಗ್ಗೆ ನಿಮ್ಮ ಒಲವು ಮತ್ತು ಪ್ರೀತಿ’ ವಿಷಯಕ್ಕೆ ಸಂಬಂಧಿಸಿದ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ವಿಜೇತರಾದ ಹುಬ್ಬಳ್ಳಿಯ ಶಿವಪ್ಪ ಉಮೇಶ್ (₹2,500), ಗದಗದ ನಿಂಗಮ್ಮ (₹1,500) ಮತ್ತು ಕೃಷ್ಣವೇಣಿ(₹1,000) ಅವರಿಗೆ ಬಹುಮಾನ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ವಿಪತ್ತು, ಆರೋಗ್ಯ ಆರೈಕೆ, ನೊಂದವರ ಮತ್ತು ದುರ್ಬಲರ ಸೇವೆಗೆ ತನ್ನನ್ನು ತಾನು ಸಮರ್ಪಿಸಿಕೊಳ್ಳಲು ಮಾನವನಿಗೆ ಮಾನವೀಯತೆ, ಸ್ವಾತಂತ್ರ್ಯ ಹಾಗೂ ನಿಷ್ಪಕ್ಷಪಾತ ಮನೋಭಾವ ಅಗತ್ಯ’ ಎಂದುಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಎಸ್.ಜಯಕುಮಾರ್ ಅಭಿಪ್ರಾಯಪಟ್ಟರು.</p>.<p>ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ಬುಧವಾರ ಆಯೋಜಿಸಿದ್ದ ರೆಡ್ಕ್ರಾಸ್ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಮಾನವೀಯ ತತ್ವ ಮತ್ತು ಮೌಲ್ಯಗಳನ್ನು ಬೆಳೆಸುವ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ರೂಪಿಸಲು ಸಂಸ್ಥೆ ಮುಂದಾಗಿದೆ. ಅದಕ್ಕೆ ಬೇಕಾದ ಎಲ್ಲ ಸಹಕಾರಗಳನ್ನು ಶಿಕ್ಷಣ ಇಲಾಖೆ ನೀಡಲಿದೆ. ಧರ್ಮ, ಜಾತಿ ನೋಡದೆ ಚಿಕಿತ್ಸೆಗೆ ಶ್ರಮಿಸುತ್ತಿರುವ ಸಂಸ್ಥೆ ಸೇವೆ ಅನನ್ಯ’ ಎಂದರು.</p>.<p>ಸಂಸ್ಥೆಯ ರಾಜ್ಯ ಘಟಕದ ಉಪಾಧ್ಯಕ್ಷ ಡಾ.ಎಂ.ಕೆ.ಶ್ರೀಧರ್, ‘ರೈಲು ಅಪಘಾತವಾದರೆ ಸಾವಿರಾರು ಮಂದಿ ನೋಡುತ್ತಾರೆ. ಆದರೆ, ಸಹಾಯಕ್ಕೆ ಯಾರೊಬ್ಬರೂ ಹೋಗುವುದಿಲ್ಲ. ಇದು ಸರಿಯಲ್ಲ. ವಯಸ್ಸಿನ ಮಿತಿಯಿಲ್ಲದೆ ಇನ್ನೊಬ್ಬರ ಕಷ್ಟಕ್ಕೆ ಹತ್ತಿರವಾಗಬೇಕು’ ಎಂದು ಹೇಳಿದರು.</p>.<p>ಸಂಸ್ಥೆಯ ರಾಜ್ಯ ಘಟಕದ ಅಧ್ಯಕ್ಷ ಎಸ್.ನಾಗಣ್ಣ, ‘ರೆಡ್ಕ್ರಾಸ್ ಸಂಸ್ಥೆಗೆ ಇನ್ಫೋಸಿಸ್ ಸಂಸ್ಥೆ ₹ 2 ಕೋಟಿ ಕೊಡುಗೆ ನೀಡಿದೆ. ಸಂಸ್ಥೆಯ ಶಾಖೆಗಳನ್ನು 9 ಜಿಲ್ಲೆಗಳಲ್ಲಿ ಸ್ಥಾಪಿಸಲಾಗಿದೆ’ ಎಂದು ಹೇಳಿದರು.</p>.<p>ಸಿಂಡಿಕೇಟ್ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ಅವರು ₹16.4 ಲಕ್ಷ ಮೌಲ್ಯದ ರಕ್ತ ನಿಧಿ ಉಪಕರಣ<br />ಗಳನ್ನು ಕೊಡುಗೆ ನೀಡಿದರು.</p>.<p>‘ರೆಡ್ ಕ್ರಾಸ್ ಬಗ್ಗೆ ನಿಮ್ಮ ಒಲವು ಮತ್ತು ಪ್ರೀತಿ’ ವಿಷಯಕ್ಕೆ ಸಂಬಂಧಿಸಿದ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ವಿಜೇತರಾದ ಹುಬ್ಬಳ್ಳಿಯ ಶಿವಪ್ಪ ಉಮೇಶ್ (₹2,500), ಗದಗದ ನಿಂಗಮ್ಮ (₹1,500) ಮತ್ತು ಕೃಷ್ಣವೇಣಿ(₹1,000) ಅವರಿಗೆ ಬಹುಮಾನ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>